TSK

TSK · ಆದಿಕಾಂಡ 18:19

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.

ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.

ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.

ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.

ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.

ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.

ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ ನನ್ನ ದೇವರನ್ನು ಬಿಟ್ಟು ದ್ರೋಹ ಮಾಡಲಿಲ್ಲ.

ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ ಬಿಟ್ಟನು.

ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.

ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.

ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು, ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು, ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, “ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;

ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.

ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.

‹ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.›

ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;

¶ ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.

ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.

ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.