ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.
TSK
TSK · ಆದಿಕಾಂಡ 18:23
مراجع Treasury of Scripture Knowledge في ಕನ್ನಡ IRV.
ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.
ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವನೋ?
ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.
ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”
ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.