ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
TSK
TSK · ಆದಿಕಾಂಡ 18:27
مراجع Treasury of Scripture Knowledge في ಕನ್ನಡ IRV.
¶ ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?
ಧೂಳಿನಲ್ಲಿರುವ ಅಸ್ತಿವಾರದ ಮೇಲೆ, ಮಣ್ಣಿನಿಂದಾದ ಶರೀರಗಳೆಂಬ ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪು ಕಂಡುಹಿಡಿಯಬಹುದು. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.
ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.
ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಏಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,
ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.
ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.