¶ ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
TSK
TSK · ಆದಿಕಾಂಡ 19:29
مراجع Treasury of Scripture Knowledge في ಕನ್ನಡ IRV.
¶ ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.
ಆ ಮೇಲೆ ನಾನು ಲೇವಿಯರಿಗೆ, “ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು” ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು.
ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.
ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು
ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು, ಆತನ ಪ್ರೀತಿಯು ಶಾಶ್ವತವಾದದ್ದು.
ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”
ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.