TSK

TSK · ಆದಿಕಾಂಡ 2:1

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.

ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.

ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.

ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.

ಇದಲ್ಲದೆ, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಾಯೇಲ್ ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ, ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ, ವಿವೇಕವುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದರಿಂದ ಆತನಿಗೆ ಸ್ತೋತ್ರವಾಗಲಿ.

ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವುದಿಲ್ಲ?

ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.

ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.

ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,

ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.

ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ. ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.

ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.

¶ “ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.

ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.

¶ ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,

ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,

ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ.