ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
TSK
TSK · ಆದಿಕಾಂಡ 2:7
مراجع Treasury of Scripture Knowledge في ಕನ್ನಡ IRV.
¶ ಮೂಗಿನಿಂದ ಉಸಿರಾಡುವ ಭೂಜಂತುಗಳೆಲ್ಲವೂ ಸತ್ತವು.
“ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವನು ಈ ಜನ ಸಮೂಹದ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.
ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತನಾದ ದೇವರಾಣೆ,
ನೋಡು, ನಾನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ. ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟಿದ್ದೇನೆ.
ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ.
ಮನುಷ್ಯನ ಆತ್ಮವು ಯೆಹೋವನ ದೀಪವಾಗಿದೆ, ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ.
ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು. ಎಲ್ಲವು ಮಣ್ಣಿನಿಂದಾದವು. ಎಲ್ಲವೂ ಮಣ್ಣಿಗೆ ಪುನಃ ಸೇರುವವು.
ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ. ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ.
ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ, ‘ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ.
¶ ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,
ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.
“ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.
¶ ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.
ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?