ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
TSK
TSK · ಆದಿಕಾಂಡ 2:8
مراجع Treasury of Scripture Knowledge في ಕನ್ನಡ IRV.
¶ ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.
ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.
ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.
ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.