TSK

TSK · ಆದಿಕಾಂಡ 20:5

مراجع Treasury of Scripture Knowledge في ಕನ್ನಡ IRV.

العودة إلى المقطع

“ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.

“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.

‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ.

ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.

ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ.

ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ, ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ.

ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.

ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.