ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.
TSK
TSK · ಆದಿಕಾಂಡ 22:18
مراجع Treasury of Scripture Knowledge في ಕನ್ನಡ IRV.
ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.
ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.
¶ ಯೆಹೋವನ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.
ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.
ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.
ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.
ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.
¶ ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.