ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು.
TSK
TSK · ಆದಿಕಾಂಡ 26:12
مراجع Treasury of Scripture Knowledge في ಕನ್ನಡ IRV.
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,
ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ” ಎಂದು ಹೇಳಿದನು.
ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;
ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.
“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.
‹ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ”› ಎಂದು ಹೇಳಿದನು.
ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.
ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.