TSK

TSK · ಆದಿಕಾಂಡ 27:19

مراجع Treasury of Scripture Knowledge في ಕನ್ನಡ IRV.

العودة إلى المقطع

ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.

ಅವನು, “ನೀನು ನಿಜವಾದ ನನ್ನ ಮಗನಾದ ಏಸಾವನೋ” ಎಂದು ಕೇಳಿದ್ದಕ್ಕೆ ಯಾಕೋಬನು, “ಹೌದು” ಎನ್ನಲು,

ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.

ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.

ಅವನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆ ನನಗೆ ಗೊತ್ತಿಲ್ಲ” ಎಂದು ಎಲ್ಲರ ಮುಂದೆ ಹೇಳಿದನು.