ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
TSK
TSK · ಆದಿಕಾಂಡ 28:13
مراجع Treasury of Scripture Knowledge في ಕನ್ನಡ IRV.
ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು.
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,
ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.
¶ ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,
¶ ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು.
¶ ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.
ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.
¶ ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.
ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು.
ಅವರಲ್ಲಿ ಸ್ವಲ್ಪ ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ,
¶ “ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.
ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.