ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ.
TSK
TSK · ಆದಿಕಾಂಡ 29:2
مراجع Treasury of Scripture Knowledge في ಕನ್ನಡ IRV.
ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ, ಅವನು ಮೋಶೆಯನ್ನು ಕೊಲ್ಲಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆಯು ಫರೋಹನ ಬಳಿಯಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದ ಒಂದು ಬಾವಿಯ ಬಳಿಯಲ್ಲಿ ಕುಳಿತುಕೊಂಡನು.
ನಾನು ಕಪ್ಪಾಗಿದ್ದೇನೆ ಎಂದು ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಕಪ್ಪಾಗಿರುವುದು ಸೂರ್ಯನ ತಾಪದಿಂದ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ಕಾಯುವುದಕ್ಕೆ ಇಟ್ಟರು; ಆದುದರಿಂದ ನನ್ನ ಸ್ವಂತ ದ್ರಾಕ್ಷಿ ತೋಟವನ್ನೂ ನಾನು ಕಾಯ್ದುಕೊಳ್ಳಲಾಗಲಿಲ್ಲ.
ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.
ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.