¶ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
TSK
TSK · ಆದಿಕಾಂಡ 31:21
مراجع Treasury of Scripture Knowledge في ಕನ್ನಡ IRV.
¶ ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.
¶ ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.
¶ ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದ ವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು.
ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.
ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೂಜೀ ಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.
¶ ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.
¶ ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.