ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು.
TSK
TSK · ಆದಿಕಾಂಡ 31:7
مراجع Treasury of Scripture Knowledge في ಕನ್ನಡ IRV.
ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.
ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ, ನೀವು ಯಾವ ಕಡೆಗೆ ತಿರುಗಿಕೊಂಡರೂ ಎಲ್ಲಾ ಕಡೆಗಳಿಂದಲೂ ಅವರು ನಮ್ಮ ವಿರುದ್ಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ಬಂದು ತಿಳಿಸುತ್ತಿದ್ದರು.
ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ.
ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.