ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
TSK
TSK · ಆದಿಕಾಂಡ 32:26
مراجع Treasury of Scripture Knowledge في ಕನ್ನಡ IRV.
ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.
ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;
ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು.
ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.
ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.
¶ ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಅವರನ್ನು ದಾಟಿ ಇನ್ನೂ ಮುಂದಕ್ಕೆ ಹೋಗುವವನಂತೆ ತೋರ್ಪಡಿಸಿಕೊಂಡನು.
ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.
¶ ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.