¶ ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.
TSK
TSK · ಆದಿಕಾಂಡ 32:30
مراجع Treasury of Scripture Knowledge في ಕನ್ನಡ IRV.
¶ ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಪುನಃ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.
¶ ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.
ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.
¶ ಮೋಶೆಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ, ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು.
ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.
ಆದ್ದರಿಂದ ಅವನು ಆ ದೂತನನ್ನು, “ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿನ್ನ ಹೆಸರೇನು” ಎಂದು ಕೇಳಿದನು.
ಯೆಹೋವನ ದೂತನು ಮಾನೋಹನಿಗೂ ಅವನ ಹೆಂಡತಿಗೂ ಮತ್ತೆ ಕಾಣಿಸಲಿಲ್ಲ. ಆಗ ಮಾನೋಹನು ಆತನು ಯೆಹೋವನ ದೂತನೆಂದು ತಿಳಿದು
ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,
ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.
ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.
ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.