ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.
TSK
TSK · ಆದಿಕಾಂಡ 32:6
مراجع Treasury of Scripture Knowledge في ಕನ್ನಡ IRV.
ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು” ಅಂದುಕೊಂಡನು.
¶ ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಜನರ ಸಮೇತ ಬರುವುದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ
¶ ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು.
¶ ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು.
ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.
ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.