ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.
TSK
TSK · ಆದಿಕಾಂಡ 34:27
مراجع Treasury of Scripture Knowledge في ಕನ್ನಡ IRV.
ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.
ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.
ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.
ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.