ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
TSK
TSK · ಆದಿಕಾಂಡ 35:29
مراجع Treasury of Scripture Knowledge في ಕನ್ನಡ IRV.
ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು.
ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
¶ ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
¶ ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.
¶ ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.
ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.