ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.
TSK
TSK · ಆದಿಕಾಂಡ 35:7
مراجع Treasury of Scripture Knowledge في ಕನ್ನಡ IRV.
¶ ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.
ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು.
ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.
ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’” ಎಂದು ಹೇಳಿದನು.
ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.
¶ ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.
¶ ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.