ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.
TSK
TSK · ಆದಿಕಾಂಡ 4:8
مراجع Treasury of Scripture Knowledge في ಕನ್ನಡ IRV.
“ನಾನು ವಿಧವೆ, ಗಂಡನು ಸತ್ತು ಹೋಗಿದ್ದಾನೆ. ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿನ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರು ಯಾರೂ ಇರಲಿಲ್ಲವಾದ್ದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.
ಅವರಲ್ಲಿ ಸನ್ಬಲ್ಲಟ್, ಗೆಷೆಮರು ನನಗೆ, “ಓನೋ ಸಮಭೂಮಿಯ ಒಂದು ಗ್ರಾಮದಲ್ಲಿ ಒಂದು ಸಭೆ ಸೇರೋಣ ಬಾ” ಎಂದು ಹೇಳಿ ಕಳುಹಿಸಿದರು. ಇದು ಅವರು ನನಗೆ ಕೇಡು ಬಗೆಯುವುದಕ್ಕಾಗಿಯೇ ಎಂದು ತಿಳಿಯಿತು.
ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು?
ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.
ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.
ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.
ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.