TSK

TSK · ಆದಿಕಾಂಡ 41:15

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.

ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.

ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.

ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.