TSK

TSK · ಆದಿಕಾಂಡ 42:1

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.

¶ ದಿನ ದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂಬ ಅಪ್ಪಣೆಯಾಗಿದ್ದರಿಂದ ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಸಿಕ್ಕಿಕೊಂಡಿವೆಂದು ತಿಳಿದುಕೊಂಡರು.

ಆಗ ಯೆಹೋವನು ಯೆಹೋಶುವನಿಗೆ ಹೇಳಿದ್ದೇನೆಂದರೆ “ಏಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇಕೆ?

ಏಳು ವರ್ಷಗಳಾದ ನಂತರ ಆಕೆಯು ಫಿಲಿಷ್ಟಿಯರ ದೇಶದಿಂದ ಸ್ವದೇಶಕ್ಕೆ ಬಂದು, ಪರಾಧೀನವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಹೋದಳು.

ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.

ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಯಾಕೋಬನು ಕೇಳಿ, ನಮ್ಮ ಪೂರ್ವಿಕರನ್ನು ಮೊದಲ ಸಾರಿ ಅಲ್ಲಿಗೆ ಕಳುಹಿಸಿದನು.