¶ ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
TSK
TSK · ಆದಿಕಾಂಡ 42:22
مراجع Treasury of Scripture Knowledge في ಕನ್ನಡ IRV.
ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.
¶ ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.
ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.
ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು.
ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.
ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,
ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.
ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.