ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.
TSK
TSK · ಆದಿಕಾಂಡ 42:28
مراجع Treasury of Scripture Knowledge في ಕನ್ನಡ IRV.
¶ “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.
ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.
ನನ್ನ ಇನಿಯನಿಗೆ ಕದ ತೆಗೆದೆನು, ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ನನ್ನೆದೆಯ ಬಡಿತವೇ ನಿಂತಂತಾಯಿತು ಅವನ ದನಿಗೆ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ.
ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.
ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?