ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
TSK
TSK · ಆದಿಕಾಂಡ 42:36
مراجع Treasury of Scripture Knowledge في ಕನ್ನಡ IRV.
ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.
ಆಗ ಇಸ್ರಾಯೇಲನು, “ನನ್ನ ಮಗನಾದ ಯೋಸೇಫನು ಜೀವಂತವಾಗಿದ್ದಾನೆ. ನಾನು ಸಾಯುವುದಕ್ಕಿಂತ ಮೊದಲು ಹೋಗಿ ಅವನನ್ನು ನೋಡುವೆನು” ಎಂದನು.
¶ ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.
ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, ‹“ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ”› ಎಂದು ಹೇಳಿದನು.
¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.