¶ ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,
TSK
TSK · ಆದಿಕಾಂಡ 42:6
مراجع Treasury of Scripture Knowledge في ಕನ್ನಡ IRV.
¶ ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.
ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.
¶ ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.
¶ ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನು ಅಲ್ಲೇ ಇದ್ದನು. ಅವರು ಅವನೆದುರಿಗೆ ಅಡ್ಡಬಿದ್ದರು.
ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.
ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.
ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.