TSK

TSK · ಆದಿಕಾಂಡ 43:1

مراجع Treasury of Scripture Knowledge في ಕನ್ನಡ IRV.

العودة إلى المقطع

¶ ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.

ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.

ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.

¶ ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.

¶ “ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.