ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?
TSK
TSK · ಆದಿಕಾಂಡ 43:9
مراجع Treasury of Scripture Knowledge في ಕನ್ನಡ IRV.
¶ ರೂಬೇನನು ತನ್ನ ತಂದೆಗೆ, “ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ” ಎಂದು ಹೇಳಿದನು.
ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು” ಎಂದು ಹೇಳಿದಳು.
ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು, ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.
ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ.
ನಾನು ದುಷ್ಟನಿಗೆ ದುಷ್ಟನೇ, ‘ನೀನು ಖಂಡಿತವಾಗಿ ಸಾಯುವೆ’ ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.
ಆದರೆ ಅವನಿಂದ ನಿನಗೆ ಏನಾದರೂ ನಷ್ಟವಾಗಿದ್ದರೆ ಅಥವಾ ಅವನು ನಿನಗೆ ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು.