TSK

TSK · ಆದಿಕಾಂಡ 47:29

مراجع Treasury of Scripture Knowledge في ಕನ್ನಡ IRV.

العودة إلى المقطع

ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, “ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.

¶ ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.

‘ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ’” ಎಂದನು.

¶ ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.

¶ ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.

ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನು ಈಗ ಅನುಸರಿಸಬೇಕಾಗಿದೆ. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಾದದ ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿದೆ ಎಂಬುದು ನಿಮಗೆ ಮನದಟ್ಟಾಗಿದೆಯಲ್ಲ.

ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.

ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ. ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ.

ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.

ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.

ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? ಸೆಲಾ

ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,