ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.
TSK
TSK · ಆದಿಕಾಂಡ 48:21
مراجع Treasury of Scripture Knowledge في ಕನ್ನಡ IRV.
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,
¶ ಯಾಕೋಬನು ತನ್ನ ತಂದೆಯು ಪ್ರವಾಸವಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು.
¶ ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ.
¶ ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.
ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನು ಈಗ ಅನುಸರಿಸಬೇಕಾಗಿದೆ. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಾದದ ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿದೆ ಎಂಬುದು ನಿಮಗೆ ಮನದಟ್ಟಾಗಿದೆಯಲ್ಲ.
“ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು.
ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,
“ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.
ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.
ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಚಿರಂಜೀವಿಯಾಗಿರುವನು.
ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.