ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.
TSK
TSK · ಆದಿಕಾಂಡ 49:1
مراجع Treasury of Scripture Knowledge في ಕನ್ನಡ IRV.
ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.
ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲೇನೂ ಉಳಿಯುವುದಿಲ್ಲ.
ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?
ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.
¶ ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು.
ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.
ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.
ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.
¶ ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ.
ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.
¶ ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, ‹“ಇಲ್ಲಿಗೆ ಏರಿ ಬಾ,›‹ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು”› ಎಂದು ಹೇಳಿತು.