ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ,
TSK
TSK · ಆದಿಕಾಂಡ 49:10
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು, ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು” ಎಂದನು.
ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.
ಯೆಹೂದ್ಯರಿಂದ ಬರ್ಜಿ, ಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟನೂರು.
“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
¶ ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.
ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.
ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.
ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು.
ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.
ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.
ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”
ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.”
ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು; ನೀನು ಇನ್ನು ಜ್ಞಾಪಕಕ್ಕೆ ಬರುವುದಿಲ್ಲ’ ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”
ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.
ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.
ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.
ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.
ಆತನು ಅವನಿಗೆ, ‹“ನೀನು ಹೋಗಿ ಸಿಲೋವ› (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ‹ಕೊಳದಲ್ಲಿ ತೊಳೆದುಕೋ”› ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.
ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.
ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.
¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.