ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
TSK
TSK · ಆದಿಕಾಂಡ 49:33
مراجع Treasury of Scripture Knowledge في ಕನ್ನಡ IRV.
¶ ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು.
ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.
ಎಲ್ಲಾ ಜನರಿಗೆ, “ಇಗೋ, ಈ ಕಲ್ಲು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಯೆಹೋವನು ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿದೆ. ಆದುದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧವಾಗಿ ಸಾಕ್ಷಿಯಾಗಿರುವುದು” ಎಂದು ಹೇಳಿ
¶ ಎಲೀಷನು ಮರಣ ಹೊಂದಲು, ಅವನ ಶವವನ್ನು ಅವರು ಸಮಾಧಿಮಾಡಿದರು. ಮೋವಾಬ್ಯರು ಪ್ರತಿ ವರ್ಷದ ಪ್ರಾರಂಭದಲ್ಲಿ ಸುಲಿಗೆ ಮಾಡುವುದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು.
ಮನುಷ್ಯನಾದರೋ ಸತ್ತು ಬೋರಲುಬೀಳುವನು, ಪ್ರಾಣಹೋಗಲು ಅವನ ಅಂತ್ಯವಾಗುತ್ತದೆ.
ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
“ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.
¶ ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.
ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,