TSK

TSK · ಆದಿಕಾಂಡ 5:22

مراجع Treasury of Scripture Knowledge في ಕನ್ನಡ IRV.

العودة إلى المقطع

ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.

¶ ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.

¶ ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,

ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ.

ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.

ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,

ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.

ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.

ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.

ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.

¶ ಗೊತ್ತುಮಾಡಿಕೊಳ್ಳದೆ ಯಾರಾದರಿಬ್ಬರು ಜೊತೆಯಾಗಿ ನಡೆಯುವುದುಂಟೆ?

ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?

ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.

¶ ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,

ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.

ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,

ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.

¶ ನಂಬಿಕೆಯಿಂದಲೇ ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು.