ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು.
TSK
TSK · ಆದಿಕಾಂಡ 5:29
مراجع Treasury of Scripture Knowledge في ಕನ್ನಡ IRV.
ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.
“ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.
ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
ಸಾಲನು ಕಯಿನಾನನ ಮಗನು; ಕಯಿನಾನನು ಅರ್ಫಕ್ಷಾದನ ಮಗನು; ಅರ್ಫಕ್ಷಾದನು ಶೇಮನ ಮಗನು; ಶೇಮನು ನೋಹನ ಮಗನು; ನೋಹನು ಲಾಮೆಕನ ಮಗನು;
¶ ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.
ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.