TSK

TSK · ಆದಿಕಾಂಡ 6:17

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.

ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು.

¶ ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು.

ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.

ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.

ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.

ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.

ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.

“ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.

‘ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.

¶ “‘ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ, ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುತ್ತೇನೆ.

ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು, ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ. ಸಮುದ್ರದ ನೀರನ್ನು ಸೇದಿ, ಭೂಮಂಡಲದ ಮೇಲೆ ಹೊಯ್ಯುತ್ತಾನೆ, ಯೆಹೋವನೆಂಬುವುದೇ ಆತನ ನಾಮಧೇಯ.

‹ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.›

ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.

ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,

ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.