TSK

TSK · ಆದಿಕಾಂಡ 6:9

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.

ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.

¶ ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು.

¶ ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,

ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.

¶ ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.

ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ, ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದೇನೆ.

ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.

ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.

ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.

ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.

ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.

ಇದಲ್ಲದೆ ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ.

¶ ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.

ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.