¶ ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.
TSK
TSK · ಆದಿಕಾಂಡ 8:1
مراجع Treasury of Scripture Knowledge في ಕನ್ನಡ IRV.
ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.
ಯೆಹೋವನ ದೂತನು ಅವನಿಗೆ, “ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.
ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ.
ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ.
ನೋಡಿರಿ, ಆತನು ನೀರುಗಳನ್ನು ತಡೆದರೆ ಅವು ಬತ್ತಿಹೋಗುತ್ತವೆ; ಆತನು ನೀರುಗಳನ್ನು ಬಿಟ್ಟರೆ, ಅವು ಭೂಮಿಯನ್ನು ಹಾಳುಮಾಡುತ್ತವೆ.
ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.
ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,
ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ.
ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.
ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.
¶ ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”
ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.
ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,
ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ.