ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.
TSK
TSK · ಆದಿಕಾಂಡ 8:20
مراجع Treasury of Scripture Knowledge في ಕನ್ನಡ IRV.
ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು.
¶ ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು.
¶ ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.
ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.
ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು.
ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.
¶ ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,
¶ ಯೆಹೋವನು ಮೋಶೆ ಆರೋನರ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
¶ ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.