TSK

TSK · ಆದಿಕಾಂಡ 8:21

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.

¶ ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.

ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು.

ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.

ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.

ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.

ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.

ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?

ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.

“ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?

ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!

ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ; ಚದರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರುವುದಿಲ್ಲ.

ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.

ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿ ತೀರಿಸುವ ತನಕ ಸುಮ್ಮನಿರಲಾರೆನು; ಅದರ ಪ್ರತಿಫಲವನ್ನು ಇವರ ಮಡಿಲಿಗೆ ಹಾಕುವೆನು;

ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?

ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.

‹ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.›

ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.

ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.

¶ ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.

ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.

¶ ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ?

ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.