ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
TSK
TSK · ಆದಿಕಾಂಡ 9:27
مراجع Treasury of Scripture Knowledge في ಕನ್ನಡ IRV.
“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.
ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.
ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.
ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.