¶ ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;
TSK
TSK · ಹಗ್ಗಾಯ 2:19
مراجع Treasury of Scripture Knowledge في ಕನ್ನಡ IRV.
ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.
ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.
ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.
ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.
ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ.
ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.