TSK

TSK · ಹಗ್ಗಾಯ 2:9

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.

ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.”

ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.

¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.

ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ.

¶ ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.