TSK

TSK · ಇಬ್ರಿಯರಿಗೆ 1:8

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ, ಹೆಣ್ಣುಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.

ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.

ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.

ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.

ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.

ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.

ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.

ಎನ್ನಲು ಯೆರೆಮೀಯನು ಚಿದ್ಕೀಯನಿಗೆ, “ನಾನು ನಿನಗೆ ತಿಳಿಸಿದರೆ ನನ್ನನ್ನು ಸಾಯಿಸಿಯೇ ಸಾಯಿಸುವಿ ಅಲ್ಲವೇ? ಆಲೋಚನೆ ಹೇಳಿದರೂ ನೀನು ಕೇಳುವುದಿಲ್ಲ” ಎಂದು ಉತ್ತರಕೊಟ್ಟನು.

¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.

¶ “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು.

ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು.

ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.

¶ ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.

ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ.

ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.