TSK

TSK · ಇಬ್ರಿಯರಿಗೆ 10:22

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.

ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷೌರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.

ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ.

ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.

ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.

ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.

ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?

ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು.

ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ, ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು.

ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.

ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ, ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.

ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು, ನಿನ್ನ ನಿಬಂಧನೆಗಳನ್ನು ಅನುಸರಿಸುವೆನು.

ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.

ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.

ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.

‹ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.›

ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.

ಸೀಮೋನ ಪೇತ್ರನು, “ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ, ಕೈಗಳನ್ನೂ, ತಲೆಯನ್ನೂ ಸಹ ತೊಳೆ” ಎಂದನು.

ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.

ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.

¶ ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.

ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.

ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.

ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,

¶ ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.

ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.

ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.

ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,