“ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ
TSK
TSK · ಇಬ್ರಿಯರಿಗೆ 11:17
مراجع Treasury of Scripture Knowledge في ಕನ್ನಡ IRV.
ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು
ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.
ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.
ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.
ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.
ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.
ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.
¶ ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.