TSK

TSK · ಇಬ್ರಿಯರಿಗೆ 11:25

مراجع Treasury of Scripture Knowledge في ಕನ್ನಡ IRV.

العودة إلى المقطع

ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡೆಸುವರು, ಅವರ ಮಕ್ಕಳು ಕುಣಿದಾಡುವರು.

ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.

ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.

“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.

‹ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.›

‹ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.›

ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.

ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.

¶ ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.

ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.

ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.

ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.

ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.

ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.

ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.