¶ ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.
TSK
TSK · ಇಬ್ರಿಯರಿಗೆ 11:33
مراجع Treasury of Scripture Knowledge في ಕನ್ನಡ IRV.
ಸೌಲನು ಅವನಿಗೆ, “ಅವನೊಡನೆ ಕಾದಾಡಲಾರೆ, ನೀನು ಇನ್ನೂ ಹುಡುಗನು ಅವನಾದರೋ ಚಿಕ್ಕಂದಿನಿಂದಲೇ ಯುದ್ಧವೀರನು” ಎಂದು ಹೇಳಿದನು.
ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದ ಇಲ್ಲಿಯವರೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನೀನು ಶತ್ರುಭಯವಿಲ್ಲದೆ ನೆಮ್ಮದಿಯಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.
ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.
ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.
ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
¶ ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು.